July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ. 5ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರುಗಿತು.

ಆಮಂತ್ರಣ ಬಿಡುಗಡೆಯನ್ನು ರೈತ ಬಂಧು ಮಾರುತಿಪುರ ಮಾಲಕ ಉದ್ಯಮಿ ಶಿವಶಂಕರ್ ನಾಯಕ್ ಬಿಡುಗಡೆಗೊಳಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಹಿಂದೂ ಸಂಗಮ ಆಯೋಜನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಅಜಿತ್ ಜಿ ಶೆಟ್ಟಿ, ಸುಳ್ಯದ ಸಾಮಾಜಿಕ ಕಾರ್ಯಕರ್ತರಾದ ಸುಭಾಷ್ ಕಳೆಂಜ, ಬೆಳ್ತಂಗಡಿ ತಾಲೂಕಿನ ಸಾಮಾಜಿಕ ಮುಂದಾಳು ಗಣೇಶ್ ಕಾಂತಾಜೆ, ಆಯೋಜನ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಜಯ ಅನಂತ್ ಕೃಷ್ಣ ಭಟ್ ಉಪಸ್ಥಿತರಿದ್ದರು.

ಹಿಂದೂ ಸಂಗಮ ಆಯೋಜನ ಸಮಿತಿಯ ಸಂಯೋಜಕ ವಕೀಲರಾದ ಅನಿಲ್ ಕುಮಾರ್ ಯು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ತುಕಾರಾಂ ಬಿ. ಧನ್ಯವಾದವಿತ್ತರು.

ಹಿಂದೂ ಸಂಗಮ ಆಯೋಜನ ಸಮಿತಿಯ ಬೆಳ್ತಂಗಡಿ ತಾಲೂಕಿನ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮಂಡಲ ನಿರ್ವಹಣಾ ತಂಡದ ಸಂಯೋಜಕರು, ತಾಲೂಕಿನ ದೈವಸ್ಥಾನ, ದೇವಸ್ಥಾನ, ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಿಂದೂ ಸಮಾಜದ ಮುಂದಾಳುಗಳು ಉಪಸ್ಥಿತರಿದ್ದರು.

Related posts

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
error: Content is protected !!