July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು


ಅರಸಿನಮಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಳವಾಗಿರುವ ವಿಠ್ಠಲ ದೇವಸ್ಥಾನಗಳ ಪೈಕಿ ಒಂದಾಗಿರುವ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಶಾಸಕರ ಅನುದಾನದಲ್ಲಿ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಕೆ. ಹೊಸ್ತೋಟ, ದೇವಳದ ಪ್ರಮುಖರಾದ ಪ್ರಭಾಕರ ಹೆಬ್ಬಾರ್ ಕೊಡಂಗೆ, ದಿನೇಶ್ ಮೆಹೆಂದಳೆ, ಅನಿಲ್ ಕುಮಾರ್, ಕಾರ್ತಿಕ್ ಹೆಬ್ಬಾರ್ ಗೋಖಲೆ, ನವೀನ್ ಶೆಂಡ್ಯೆ,ಬಿಜೆಪಿ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ. ಶಾಸಕರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಶಾಸಕರನ್ನು ದೇವಳದ ಸಮಿತಿ ವತಿಯಿಂದ ಗೌರವಿಸಲಾಯಿತು.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!