23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!