September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

ಬೆಳ್ತಂಗಡಿ: ಶಿಕ್ಷಣ ಪ್ರೇಮಿ, ಕೊಡುಗೈ ದಾನಿ ಬೆಂಗಳೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಗೂರು ಇದರ ಧರ್ಮದರ್ಶಿಗಳಾದ ಡಾ. ನಾರಾಯಣ ಬೇಗೂರು ಶಾಲೆಗೆ ಭೇಟಿ ನಿಡಿ ಶಾಲಾ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು.

ಶಾಲೆಯ ಮೂಲಭೂತ ತುರ್ತು ಅಗತ್ಯತೆಗಳನ್ನು ವಿವರಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಶಾಲೆಯ ಭೌತಿಕ ಅಭಿವೃದ್ಧಿಗೆ ನೆರವು ನೀಡುವ ಭರವಸೆಯನ್ನು ನೀಡಿದರು. ಇವರು ಶಾಲೆಗೆ ಭೇಟಿ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ದೇವಾಡಿಗ, ವಿಘ್ನೇಶ್ ಆಚಾರ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಹೆಗ್ಗಡೆ ನಿರಂತರ ಸಂಪರ್ಕ ಹಾಗೂ ಪ್ರಯತ್ನ ನಡೆಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಉಪಾಧ್ಯಕ್ಷೆ ಶ್ರೀಮತಿ ಆರತಿ ಯರ್ಡೂರು, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಮತ್ತು ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya
error: Content is protected !!