23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

ಬೆಳ್ತಂಗಡಿ: ಶಿಕ್ಷಣ ಪ್ರೇಮಿ, ಕೊಡುಗೈ ದಾನಿ ಬೆಂಗಳೂರಿನ ಶ್ರೀ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಗೂರು ಇದರ ಧರ್ಮದರ್ಶಿಗಳಾದ ಡಾ. ನಾರಾಯಣ ಬೇಗೂರು ಶಾಲೆಗೆ ಭೇಟಿ ನಿಡಿ ಶಾಲಾ ಪೋಷಕರು ಮತ್ತು ಶಾಲೆಯ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು.

ಶಾಲೆಯ ಮೂಲಭೂತ ತುರ್ತು ಅಗತ್ಯತೆಗಳನ್ನು ವಿವರಿಸಿದ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ಮುಂದಿನ ದಿನಗಳಲ್ಲಿ ಶಾಲೆಯ ಭೌತಿಕ ಅಭಿವೃದ್ಧಿಗೆ ನೆರವು ನೀಡುವ ಭರವಸೆಯನ್ನು ನೀಡಿದರು. ಇವರು ಶಾಲೆಗೆ ಭೇಟಿ ನೀಡುವಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ದೇವಾಡಿಗ, ವಿಘ್ನೇಶ್ ಆಚಾರ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿನಿ, ನಿವೃತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಶೀಲಾ ಹೆಗ್ಗಡೆ ನಿರಂತರ ಸಂಪರ್ಕ ಹಾಗೂ ಪ್ರಯತ್ನ ನಡೆಸಿರುತ್ತಾರೆ.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಝಮೀರುದ್ದೀನ್, ಉಪಾಧ್ಯಕ್ಷೆ ಶ್ರೀಮತಿ ಆರತಿ ಯರ್ಡೂರು, ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣ ಪುತ್ತೂರಾಯ ಮತ್ತು ಸಮಿತಿಯ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!