22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್, ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಹಯಾತುಲ್ ಇಸ್ಲಾಂ ಮದರಸ- ಬೆಳ್ತಂಗಡಿ ಹಾಗೂ ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಸಹಯೋಗದೊಂದಿಗೆ ಮರ್ಹೂಂ ಶಾಝಿನ್ ಸ್ಮರಣಾರ್ಥ ರಕ್ತದಾನ ಶಿಬಿರ ಖಿಲರ್ ಜುಮ್ಮಾ ಮಸೀದಿ ವಠಾರದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ರಕ್ತದಾನ ಶಿಬಿರವನ್ನು ಅಕ್ಬರ್ ಬೆಳ್ತಂಗಡಿ ಉದ್ಘಾಟಿಸಿದರು . ವೆನ್ ಲಾಕ್ ಸರಕಾರಿ ಆಸ್ಪತ್ರೆ- ಮಂಗಳೂರು ಇದರ ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, ಹಯಾತುಲ್ ಇಸ್ಲಾಂ ಮದರಸ ಅಧ್ಯಕ್ಷ ಬಿ ಶೇಕುಂಞ್ಞ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಇದರ ಪ್ರಧಾನ ಕಾರ್ಯದರ್ಶಿ ಖಾದರ್ ನಾವೂರು ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಖಿಳರ್ ಜುಮ್ಮಾ ಮಸೀದಿ ಖತೀಬರಾದ ಹನೀಫ್ ಫೈಝಿ, ಮುಹಿಯುದ್ದೀನ್ ಜುಮ್ಮಾ ಮಸೀದಿ ಮುರ-ನಾವೂರು ಖತೀಬರಾದ ಬಶೀರ್ ಸಅದಿ ಕೆಮ್ಮಾರ, ಬೆಳ್ತಂಗಡಿ ಮುಸ್ಲಿಂ ಒಕ್ಕೂಟ ಅಧ್ಯಕ್ಷ ಬಿ.ಎ ನಝೀರ್, ಖಿಳರ್ ಜುಮ್ಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಗಾಳದ ರಝಾಕ್ ಕೋಡಿಸಭೆ, ಸಲೀಂ ಮುರ, ಹನೀಫ್ ವರ್ಷಾ, ಇಸ್ಮಾಲಿ ಐ.ಬಿ, ಮಹಮ್ಮದ್ ಕುದ್ರಡ್ಕ, ಅಬ್ಬಾಸ್ ಸಂಜಯನಗರ, ರಿಜ್ವಾನ್ ಬಿ.ಕೆ, ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಶೈರೋಝ್ ಉದಯನಗರ ಹಾಗೂ ಊರಿನ ನಾಗರಿಕರು ಇತರರು ಉಪಸ್ಥಿತರಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 53 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಶಬೀರ್ ಸಂಜಯನಗರ ಕಾರ್ಯಕ್ರಮ ನಿರೂಪಿಸಿದರು.

Related posts

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಮಾ.7-8: ಆದಿಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರ ಪಾರಾಯಣ, ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!