25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ‌. 5 ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ , ಜಿಲ್ಲಾ ಕಾರ್ಯದರ್ಶಿಗಳಾದ ಪ್ರೇಮನಾಥ್, ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಕಾರ್ಯಕರ್ತರು ಭಾಗವಹಿಸಿದ್ದರು.

ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಇತ್ತೀಚೆಗೆ ಅಗಲಿದ ವಿನಯ್ ಹೆಗ್ಡೆ ಹಾಗೂ ಮಂಜಪ್ಪ ದೇವಾಡಿಗರ ವ್ಯಕ್ತಿತ್ವದ ಬಗ್ಗೆ ತಿಳಿಸಿ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ನಿವೃತ್ತ ಸರ್ಕಾರಿ ಉದ್ಯೋಗಿಗಳಾದ ಪ್ರಸನ್ನ ಕುಮಾರ್ ಹಾಗೂ ಪದ್ಮ ಕುಮಾರ್ ಅವರನ್ನು ಪಕ್ಷದ ಧ್ವಜ ನೀಡಿ ಸೇರ್ಪಡೆಗೊಳಿಸಲಾಯಿತು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಣೇಶ್ ನಾವೂರು ವಂದೇ ಮಾತರಂ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್ ಸ್ವಾಗತಿಸಿ, ಪ್ರಶಾಂತ್ ಪಾರೆಂಕಿ ವಂದಿಸಿದರು. ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ನಿರೂಪಿಸಿದರು.

Related posts

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya
error: Content is protected !!