22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಪಿಲಿಕುಳದ ಸ್ಕೌಟ್ ಗೈಡ್ ಭವನದಲ್ಲಿ ಜ. 3 ಮತ್ತು 4ರಂದು ನಡೆದ ಭಾರತೀಯ ಜೈನ್ ಮಿಲನ್ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ತೃತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಅನಿಕ ಜೈನ್ ಹಾಗೂ ಶುಕ್ತಿ ಜೈನ್ ಭಾಗವಹಿಸಿರುತ್ತಾರೆ.

ಉಜಿರೆಯ ತೃಪ್ತ ಕುಮಾರ್ ಜೈನ್ ಸಂಯೋಜಿಸಿದ ವಿಜೇತ ಜಿನಭಜನಾ ತಂಡಗಳಿಗೆ ಸೋನಿಯಾ ಯಶೋವರ್ಮ ರವರು ಮಾರ್ಗದರ್ಶನ ನೀಡಿ, ಅಭಿನಂದಿಸಿರುತ್ತಾರೆ.

ಶಾಲೆಯ ವತಿಯಿಂದ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

Suddi Udaya
error: Content is protected !!