25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ ದುರಸ್ತಿ ಕಂಡಿದೆ.

12 ಕೀಮಿ.ಉದ್ದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನರ ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ ದೊರೆತಿದೆ. ಈ ರಸ್ತೆ ಸಂಪೂರ್ಣವಾಗಿ ಡಾಮರೀಕರಣ ಆಗಬೇಕೆಂಬುದು ಸಾರ್ವಜನಿಕರ ಆಶಯ ಆದರೆ ಗುಂಡಿಗಳ ದರ್ಬಾರ್‌ಗೆ ತಾತ್ಕಲಿಕ ಪರಿಹಾರ ದೊರೆತಾಂಗಿದೆ. ಕಳೆದ ಜೂನ್ ತಿಂಗಳಿನಿಂದ ಸುದ್ದಿಉದಯ ಪತ್ರಿಕೆ ನಿರಂತರವಾಗಿ ರಸ್ತೆಯ ಅವ್ಯವಸ್ಥೆಯ ಕುರಿತು ವರದಿ ಪ್ರಕಟಿಸಿ ತಾತ್ಕಲಿಕ ಪರಿಹಾರಕ್ಕೆ ಜನರಧ್ವನಿಯಾಗಿ ನಿಂತಿತ್ತು. ಜನಸ್ಪಂದನ ಸಭೆಯಲ್ಲಿ ರಸ್ತೆಯ ಅವ್ಯವಸ್ಥೆ ಕುರಿತು ವಿಷಯ ಪ್ರಸ್ತಾಪವಾದಗ ಶಾಸಕ ಹರೀಶ್ ಪೂಂಜ ಪ್ಯಾಚ್ ವಾರ್ಕ್ ಕಾಮಗಾರಿ ಒಂದುವಾರದೊಳಗೆ ಆರಂಭವಾಗಲಿದೆ ಅಲ್ಲದೇ ಈ ರಸ್ತೆ ಸಂಪೂರ್ಣ ದುರಸ್ತಿಗೆ ಎಸ್‌ಹೆಚ್‌ಡಿಪಿ ಅಡಿಯಲ್ಲಿ 12 ಕೋಟಿ ರೂ.ಮೀಸಲಿರಿಸಿ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya
error: Content is protected !!