July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶವನ್ನು ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿಯಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ‘ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

1 ವರ್ಷದ ಅವಧಿಗೆ ತಿಮರೋಡಿ ಅವರನ್ನು ಗಡೀಪಾರು ಮಾಡಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಪುತ್ತೂರು ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಮಾಡದ ಕಾರಣ ಗಡಿಪಾರು ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಹೊಸದಾಗಿ ಆದೇಶ ಹೊರಡಿಸಬಹುದು ಎಂದು ಹೇಳಿತ್ತು. ಅದರಂತೆ, ಹೊಸದಾಗಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya
error: Content is protected !!