25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಯಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲರ ಮುಂದಾಳತ್ವದಲ್ಲಿ ನಡೆಯಿತು.

ಘಂಟಾ ಗೋಪುರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರವರು ನೆರವೇರಿಸಲಿದ್ದಾರೆ ಎಂದವರು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು,ಪಿಎಚ್ ನಿತ್ಯಾನಂದ ಶೆಟ್ಟಿ,ಹರೀಶ್ ಆಚಾರ್ಯ, ಭರತೇಶ್ ಜರ್ಮನಿ, ಸುಭಾಶ್ಚಂದ್ರ ರೈ ಪಡ್ಯೋಡಿ,ಮೋಹನದಾಸ್ ಎ, ಧರ್ಣಪ್ಪ ಪೂಜಾರಿ ದೊರಿಂಜ, ಅಭಿಷೇಕ್ ನೀರಲ್ಕೆ,ಪ್ರಸಾದ್ ಅಬ್ಬನಬಾಕ್ಯಾರು, ಜಿನ್ನಪ್ಪ ನೀರಲ್ಕೆ, ರಘು ದೇವಾಡಿಗ, ವಿಜಯ ಕುಮಾರ್ ಜೈನ್, ಸುಪ್ರೀತ್ ಜೈನ್, ಶಶಿಕಾಂತ್ ನಾಯಕ್, ಪೂರ್ಣಿಮಾ ಪ್ರಮೋದ್, ಆಟೋ ಚಾಲಕ ಸಂಘದ ಅಧ್ಯಕ್ಷ ಕೊರಗಪ್ಪ, ಕಿರಣ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!