25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿರುವ ದಾನಿ ಯು.ಎ.ಇ.ಯ ಪ್ರಜೆ ಮ. ಶೈಖ್ ಅಬ್ದುಲ್ ಬಾರಿಯವರ ಮಗ ಖಾಲಿದ್ ಅಲ್ ಝುಬೈರ್ ಅವರು ಇತ್ತೀಚೆಗೆ ದಾರುನ್ನೂರ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರೂ, ದ.ಕ.ಜಿಲ್ಲಾ ಖಾಝಿಯವರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ದಾರುನ್ನೂರ್ ಯು.ಎ.ಇ. ರಾಷ್ಟ್ರೀಯ ಸಮಿತಿಯ ನೇತಾರರಾದ ಶಂಶುದ್ದೀನ್ ಒಳಪಟ್ಟಣಂ, ದುಬೈ ಸಮಿತಿಯ ಅಧ್ಯಕ್ಷ ಶಂಶುದ್ದೀನ್ ಕಲ್ಕರ್ ಹಾಗೂ ಯು.ಎ.ಇ.ಕೋರ್ ಕಮಿಟಿ ಮುಖ್ಯಸ್ಥ ರಫೀಕ್ ಸುರತ್ಕಲ್ ಅವರನ್ನು ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಕೋಶಾಧಿಕಾರಿ ಡಿ.ಎ. ಉಸ್ಮಾನ್ ಏರ್ ಇಂಡಿಯಾ, ಉಪಾಧ್ಯಕ್ಷರಾದ ಅಬ್ದುಲ್ ಸಮದ್ ಹಾಜಿ, ಪಿ.ಟಿ.ಏ.ಅಧ್ಯಕ್ಷರಾದ ಫಕೀರಬ್ಬ ಮಾಸ್ಟರ್, ಸದರ್ ಮುದರ್ರಿಸ್ ಹುಸೈನ್ ರಹ್ಮಾನಿ, ಮೆನೇಜರ್ ಅಬ್ದುಲ್ ಹಕೀಮ್, ಅರೆಬಿಕ್ ವಿಭಾಗದ ಮುಖ್ಯಸ್ಥ ರವೂಫ್ ಹುದವಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಹೆಚ್.ಮುಹಮ್ಮದ್ ವೇಣೂರು

Related posts

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
error: Content is protected !!