September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿರುವ ದಾನಿ ಯು.ಎ.ಇ.ಯ ಪ್ರಜೆ ಮ. ಶೈಖ್ ಅಬ್ದುಲ್ ಬಾರಿಯವರ ಮಗ ಖಾಲಿದ್ ಅಲ್ ಝುಬೈರ್ ಅವರು ಇತ್ತೀಚೆಗೆ ದಾರುನ್ನೂರ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರೂ, ದ.ಕ.ಜಿಲ್ಲಾ ಖಾಝಿಯವರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ದಾರುನ್ನೂರ್ ಯು.ಎ.ಇ. ರಾಷ್ಟ್ರೀಯ ಸಮಿತಿಯ ನೇತಾರರಾದ ಶಂಶುದ್ದೀನ್ ಒಳಪಟ್ಟಣಂ, ದುಬೈ ಸಮಿತಿಯ ಅಧ್ಯಕ್ಷ ಶಂಶುದ್ದೀನ್ ಕಲ್ಕರ್ ಹಾಗೂ ಯು.ಎ.ಇ.ಕೋರ್ ಕಮಿಟಿ ಮುಖ್ಯಸ್ಥ ರಫೀಕ್ ಸುರತ್ಕಲ್ ಅವರನ್ನು ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಕೋಶಾಧಿಕಾರಿ ಡಿ.ಎ. ಉಸ್ಮಾನ್ ಏರ್ ಇಂಡಿಯಾ, ಉಪಾಧ್ಯಕ್ಷರಾದ ಅಬ್ದುಲ್ ಸಮದ್ ಹಾಜಿ, ಪಿ.ಟಿ.ಏ.ಅಧ್ಯಕ್ಷರಾದ ಫಕೀರಬ್ಬ ಮಾಸ್ಟರ್, ಸದರ್ ಮುದರ್ರಿಸ್ ಹುಸೈನ್ ರಹ್ಮಾನಿ, ಮೆನೇಜರ್ ಅಬ್ದುಲ್ ಹಕೀಮ್, ಅರೆಬಿಕ್ ವಿಭಾಗದ ಮುಖ್ಯಸ್ಥ ರವೂಫ್ ಹುದವಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಹೆಚ್.ಮುಹಮ್ಮದ್ ವೇಣೂರು

Related posts

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya
error: Content is protected !!