26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲುವೆ ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಜ.6 ರಂದು ಬಾವಲಿಗುಂಡಿ ಪರಿಸರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಅನುದಾನ ಬಿಡುಗಡೆಗೊಳಿಸಲು ಶ್ರಮಿಸಿದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಹಾಲು ಎರೆದು ಕಾಮಗಾರಿಗೆ ಚಾಲನೆ ನೀಡಿದರು.
ಅಳದಂಗಡಿ ಗ್ರಾ.ಪಂ.ಸದಸ್ಯ ಪ್ರವೀಣ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ, ಸ್ಥಳೀಯರಾದ ಮುರಲೀಧರ ಗೋಖಲೆ, ಪ್ರಭಾಕರ ಆಠವಳೆ, ನಿರಂಜನ ಜೋಶಿ, ರಾಜೇಂದ್ರ ಗೋಖಲೆ, ಅಮರೇಶ ಜೋಶಿ, ಪ್ರಶಾಂತ ನಾತು, ಲೋಲಾಕ್ಷ ಶೆಟ್ಟಿ ಪಡ್ಯೋಡಿ, ಸದಾನಂದ ಪೂಜಾರಿ ಉಂಗಿಲ ಬೈಲು, ಕಟ್ಟೂರು ಶಿವ ಭಟ್, ಶಂಕರ ಭಟ್, ಸಂತು, ಇಂಜಿನಿಯರ್ ರಾಕೇಶ್, ಗುತ್ತಿಗೆದಾರ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುರೋಹಿತ ಪದ್ಮನಾಭ ಜೋಶಿ ಭೂಮಿ ಪೂಜನ ನೆರವೇರಿಸಿದರು. ಕೂಡಲೇ ಅಣೆಕಟ್ಟಿಗೆ ಹಲಗೆ ಇಳಿಸಲಾಗುವುದು ಹಾಗೂ ಮುಂದಿನ ಮಳೆಗಾಲದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್ ತಿಳಿಸಿದರು. ಪತ್ರಕರ್ತ ದೀಪಕ ಆಠವಳೆ ಸ್ವಾಗತಿಸಿ, ವಂದಿಸಿದರು.

ರಸ್ತೆ ಅಭಿವೃದ್ಧಿ ಶಾಸಕರಿಗೆ ಬೇಡಿಕೆ: ಇದೇ ವೇಳೆ ಸ್ಥಳೀಯರು, ಬಳಂಜವನ್ನು ಸಂಪರ್ಕಿಸುವ ನಡಾಯಿ – ಆನೆಪಿಲ ಮಣ್ಣಿನ ರಸ್ತೆಯನ್ನು ಸರ್ವ‌ಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Related posts

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!