July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲುವೆ ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಜ.6 ರಂದು ಬಾವಲಿಗುಂಡಿ ಪರಿಸರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಅನುದಾನ ಬಿಡುಗಡೆಗೊಳಿಸಲು ಶ್ರಮಿಸಿದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಹಾಲು ಎರೆದು ಕಾಮಗಾರಿಗೆ ಚಾಲನೆ ನೀಡಿದರು.
ಅಳದಂಗಡಿ ಗ್ರಾ.ಪಂ.ಸದಸ್ಯ ಪ್ರವೀಣ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ, ಸ್ಥಳೀಯರಾದ ಮುರಲೀಧರ ಗೋಖಲೆ, ಪ್ರಭಾಕರ ಆಠವಳೆ, ನಿರಂಜನ ಜೋಶಿ, ರಾಜೇಂದ್ರ ಗೋಖಲೆ, ಅಮರೇಶ ಜೋಶಿ, ಪ್ರಶಾಂತ ನಾತು, ಲೋಲಾಕ್ಷ ಶೆಟ್ಟಿ ಪಡ್ಯೋಡಿ, ಸದಾನಂದ ಪೂಜಾರಿ ಉಂಗಿಲ ಬೈಲು, ಕಟ್ಟೂರು ಶಿವ ಭಟ್, ಶಂಕರ ಭಟ್, ಸಂತು, ಇಂಜಿನಿಯರ್ ರಾಕೇಶ್, ಗುತ್ತಿಗೆದಾರ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುರೋಹಿತ ಪದ್ಮನಾಭ ಜೋಶಿ ಭೂಮಿ ಪೂಜನ ನೆರವೇರಿಸಿದರು. ಕೂಡಲೇ ಅಣೆಕಟ್ಟಿಗೆ ಹಲಗೆ ಇಳಿಸಲಾಗುವುದು ಹಾಗೂ ಮುಂದಿನ ಮಳೆಗಾಲದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್ ತಿಳಿಸಿದರು. ಪತ್ರಕರ್ತ ದೀಪಕ ಆಠವಳೆ ಸ್ವಾಗತಿಸಿ, ವಂದಿಸಿದರು.

ರಸ್ತೆ ಅಭಿವೃದ್ಧಿ ಶಾಸಕರಿಗೆ ಬೇಡಿಕೆ: ಇದೇ ವೇಳೆ ಸ್ಥಳೀಯರು, ಬಳಂಜವನ್ನು ಸಂಪರ್ಕಿಸುವ ನಡಾಯಿ – ಆನೆಪಿಲ ಮಣ್ಣಿನ ರಸ್ತೆಯನ್ನು ಸರ್ವ‌ಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Related posts

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!