July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ಬಳಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ ಗುರುವಾಯನಕೆರೆ ಮತ್ತು ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣ ಗುರುವಾಯನಕೆರೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕಕಾರಂದೂರು ಬಿ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಶೆಟ್ಟಿ ವಹಿಸಿದರು. ಕಾರ್ಯಕ್ರಮವನ್ನು ಗುರುವಾಯನಕೆರೆ ಒಕ್ಕೂಟದ ಅಧ್ಯಕ್ಷ ಮಹೇಶ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.

ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ಭಾಗವಹಿಸಿ, ಒಕ್ಕೂಟದ ಮಹತ್ವ, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ, ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಿಕೊಡುವ ಬಗ್ಗೆ, ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.
ಉತ್ತಮ ಒಕ್ಕೂಟವನ್ನು ಗುರುತಿಸಲಾಯಿತು. ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋದ ಸ್ವಾಗತಿಸಿದರು, ಬಳಂಜ ವಲಯದ ಮೇಲ್ವಿಚಾರಕರಾದ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.
ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಹಾಗೂ ಬಾಳಂಜ ವಲಯದ ಸೇವಾ ಪ್ರತಿನಿಧಿಯವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!