23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ ದುರಸ್ತಿ ಕಂಡಿದೆ.

12 ಕೀಮಿ.ಉದ್ದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನರ ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ ದೊರೆತಿದೆ. ಈ ರಸ್ತೆ ಸಂಪೂರ್ಣವಾಗಿ ಡಾಮರೀಕರಣ ಆಗಬೇಕೆಂಬುದು ಸಾರ್ವಜನಿಕರ ಆಶಯ ಆದರೆ ಗುಂಡಿಗಳ ದರ್ಬಾರ್‌ಗೆ ತಾತ್ಕಲಿಕ ಪರಿಹಾರ ದೊರೆತಾಂಗಿದೆ. ಕಳೆದ ಜೂನ್ ತಿಂಗಳಿನಿಂದ ಸುದ್ದಿಉದಯ ಪತ್ರಿಕೆ ನಿರಂತರವಾಗಿ ರಸ್ತೆಯ ಅವ್ಯವಸ್ಥೆಯ ಕುರಿತು ವರದಿ ಪ್ರಕಟಿಸಿ ತಾತ್ಕಲಿಕ ಪರಿಹಾರಕ್ಕೆ ಜನರಧ್ವನಿಯಾಗಿ ನಿಂತಿತ್ತು. ಜನಸ್ಪಂದನ ಸಭೆಯಲ್ಲಿ ರಸ್ತೆಯ ಅವ್ಯವಸ್ಥೆ ಕುರಿತು ವಿಷಯ ಪ್ರಸ್ತಾಪವಾದಗ ಶಾಸಕ ಹರೀಶ್ ಪೂಂಜ ಪ್ಯಾಚ್ ವಾರ್ಕ್ ಕಾಮಗಾರಿ ಒಂದುವಾರದೊಳಗೆ ಆರಂಭವಾಗಲಿದೆ ಅಲ್ಲದೇ ಈ ರಸ್ತೆ ಸಂಪೂರ್ಣ ದುರಸ್ತಿಗೆ ಎಸ್‌ಹೆಚ್‌ಡಿಪಿ ಅಡಿಯಲ್ಲಿ 12 ಕೋಟಿ ರೂ.ಮೀಸಲಿರಿಸಿ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದರು.

Related posts

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya
error: Content is protected !!