ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶವನ್ನು ತಿಮರೋಡಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿಯಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ‘ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
1 ವರ್ಷದ ಅವಧಿಗೆ ತಿಮರೋಡಿ ಅವರನ್ನು ಗಡೀಪಾರು ಮಾಡಿ ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಪುತ್ತೂರು ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಮಾಡದ ಕಾರಣ ಗಡಿಪಾರು ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಹೊಸದಾಗಿ ಆದೇಶ ಹೊರಡಿಸಬಹುದು ಎಂದು ಹೇಳಿತ್ತು. ಅದರಂತೆ, ಹೊಸದಾಗಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.











