September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಯಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲರ ಮುಂದಾಳತ್ವದಲ್ಲಿ ನಡೆಯಿತು.

ಘಂಟಾ ಗೋಪುರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರವರು ನೆರವೇರಿಸಲಿದ್ದಾರೆ ಎಂದವರು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು,ಪಿಎಚ್ ನಿತ್ಯಾನಂದ ಶೆಟ್ಟಿ,ಹರೀಶ್ ಆಚಾರ್ಯ, ಭರತೇಶ್ ಜರ್ಮನಿ, ಸುಭಾಶ್ಚಂದ್ರ ರೈ ಪಡ್ಯೋಡಿ,ಮೋಹನದಾಸ್ ಎ, ಧರ್ಣಪ್ಪ ಪೂಜಾರಿ ದೊರಿಂಜ, ಅಭಿಷೇಕ್ ನೀರಲ್ಕೆ,ಪ್ರಸಾದ್ ಅಬ್ಬನಬಾಕ್ಯಾರು, ಜಿನ್ನಪ್ಪ ನೀರಲ್ಕೆ, ರಘು ದೇವಾಡಿಗ, ವಿಜಯ ಕುಮಾರ್ ಜೈನ್, ಸುಪ್ರೀತ್ ಜೈನ್, ಶಶಿಕಾಂತ್ ನಾಯಕ್, ಪೂರ್ಣಿಮಾ ಪ್ರಮೋದ್, ಆಟೋ ಚಾಲಕ ಸಂಘದ ಅಧ್ಯಕ್ಷ ಕೊರಗಪ್ಪ, ಕಿರಣ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!