22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಯಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲರ ಮುಂದಾಳತ್ವದಲ್ಲಿ ನಡೆಯಿತು.

ಘಂಟಾ ಗೋಪುರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರವರು ನೆರವೇರಿಸಲಿದ್ದಾರೆ ಎಂದವರು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು,ಪಿಎಚ್ ನಿತ್ಯಾನಂದ ಶೆಟ್ಟಿ,ಹರೀಶ್ ಆಚಾರ್ಯ, ಭರತೇಶ್ ಜರ್ಮನಿ, ಸುಭಾಶ್ಚಂದ್ರ ರೈ ಪಡ್ಯೋಡಿ,ಮೋಹನದಾಸ್ ಎ, ಧರ್ಣಪ್ಪ ಪೂಜಾರಿ ದೊರಿಂಜ, ಅಭಿಷೇಕ್ ನೀರಲ್ಕೆ,ಪ್ರಸಾದ್ ಅಬ್ಬನಬಾಕ್ಯಾರು, ಜಿನ್ನಪ್ಪ ನೀರಲ್ಕೆ, ರಘು ದೇವಾಡಿಗ, ವಿಜಯ ಕುಮಾರ್ ಜೈನ್, ಸುಪ್ರೀತ್ ಜೈನ್, ಶಶಿಕಾಂತ್ ನಾಯಕ್, ಪೂರ್ಣಿಮಾ ಪ್ರಮೋದ್, ಆಟೋ ಚಾಲಕ ಸಂಘದ ಅಧ್ಯಕ್ಷ ಕೊರಗಪ್ಪ, ಕಿರಣ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!