22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

ಕಾಶಿಪಟ್ಣದ ದಾರುನ್ನೂರ್ ವಿದ್ಯಾ ಸಂಸ್ಥೆಯಲ್ಲಿರುವ ಬಹರುನ್ನೂರ್ ಜುಮ್ಮಾ ಮಸೀದಿಯನ್ನು ನಿರ್ಮಿಸಿರುವ ದಾನಿ ಯು.ಎ.ಇ.ಯ ಪ್ರಜೆ ಮ. ಶೈಖ್ ಅಬ್ದುಲ್ ಬಾರಿಯವರ ಮಗ ಖಾಲಿದ್ ಅಲ್ ಝುಬೈರ್ ಅವರು ಇತ್ತೀಚೆಗೆ ದಾರುನ್ನೂರ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರೂ, ದ.ಕ.ಜಿಲ್ಲಾ ಖಾಝಿಯವರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ದಾರುನ್ನೂರ್ ಯು.ಎ.ಇ. ರಾಷ್ಟ್ರೀಯ ಸಮಿತಿಯ ನೇತಾರರಾದ ಶಂಶುದ್ದೀನ್ ಒಳಪಟ್ಟಣಂ, ದುಬೈ ಸಮಿತಿಯ ಅಧ್ಯಕ್ಷ ಶಂಶುದ್ದೀನ್ ಕಲ್ಕರ್ ಹಾಗೂ ಯು.ಎ.ಇ.ಕೋರ್ ಕಮಿಟಿ ಮುಖ್ಯಸ್ಥ ರಫೀಕ್ ಸುರತ್ಕಲ್ ಅವರನ್ನು ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಕೋಶಾಧಿಕಾರಿ ಡಿ.ಎ. ಉಸ್ಮಾನ್ ಏರ್ ಇಂಡಿಯಾ, ಉಪಾಧ್ಯಕ್ಷರಾದ ಅಬ್ದುಲ್ ಸಮದ್ ಹಾಜಿ, ಪಿ.ಟಿ.ಏ.ಅಧ್ಯಕ್ಷರಾದ ಫಕೀರಬ್ಬ ಮಾಸ್ಟರ್, ಸದರ್ ಮುದರ್ರಿಸ್ ಹುಸೈನ್ ರಹ್ಮಾನಿ, ಮೆನೇಜರ್ ಅಬ್ದುಲ್ ಹಕೀಮ್, ಅರೆಬಿಕ್ ವಿಭಾಗದ ಮುಖ್ಯಸ್ಥ ರವೂಫ್ ಹುದವಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಹೆಚ್.ಮುಹಮ್ಮದ್ ವೇಣೂರು

Related posts

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!