22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

ಬೆಳ್ತಂಗಡಿ : ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ನಿಡ್ಲೆ ಉಪ ಆರೋಗ್ಯ ಕೇಂದ್ರವು ತನ್ನ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು ವೈದ್ಯರು ಮತ್ತು ಸಿಬ್ಬಂದಿ ವರ್ಗದ ಉತ್ತಮ ಗುಣಮಟ್ಟದ ಸೇವಾ ಸಾಧನೆಗಾಗಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗುವ ಮೂಲಕ
ಇಲಾಖಾ ಮಟ್ಟದಲ್ಲಿ ವ್ಯಾಪಕ ಅಭಿನಂದನೆಗೆ ಪಾತ್ರವಾಗಿದೆ.

ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು 2001ರಲ್ಲಿ ಪ್ರಾರಂಭಗೊಂಡಿದ್ದು 2021ರಲ್ಲಿ ಮೇಲ್ದರ್ಜೆಗೇರಿ ಸಮುದಾಯ ಆರೋಗ್ಯಾಧಿಕಾರಿ ಹುದ್ದೆ ನೇಮಕಗೊಂಡಿತ್ತು.
ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತುಷಾರ ಕುಮಾರಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದೀಗ ನಿಡ್ಲೆ ಆಯುಷ್ಮಾನ್ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ವಿನುತಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸುಜಾತ, ಆಶಾ ಕಾರ್ಯಕರ್ತೆಯರಾದ ಯುಮುನಾ, ಸುನೀತಾ, ಚಂದ್ರಾವತಿ‌ ಇವರು ವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಈ ಭಾಗದ ಜನರು ಎಲ್ಲಾ ಪ್ರಾಥಮಿಕ ಸೇವೆಗಳನ್ನು ಪಡೆಯುತ್ತಿದ್ದಾರೆ.

Related posts

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya
error: Content is protected !!