July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲುವೆ ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಜ.6 ರಂದು ಬಾವಲಿಗುಂಡಿ ಪರಿಸರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಅನುದಾನ ಬಿಡುಗಡೆಗೊಳಿಸಲು ಶ್ರಮಿಸಿದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಹಾಲು ಎರೆದು ಕಾಮಗಾರಿಗೆ ಚಾಲನೆ ನೀಡಿದರು.
ಅಳದಂಗಡಿ ಗ್ರಾ.ಪಂ.ಸದಸ್ಯ ಪ್ರವೀಣ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ, ಸ್ಥಳೀಯರಾದ ಮುರಲೀಧರ ಗೋಖಲೆ, ಪ್ರಭಾಕರ ಆಠವಳೆ, ನಿರಂಜನ ಜೋಶಿ, ರಾಜೇಂದ್ರ ಗೋಖಲೆ, ಅಮರೇಶ ಜೋಶಿ, ಪ್ರಶಾಂತ ನಾತು, ಲೋಲಾಕ್ಷ ಶೆಟ್ಟಿ ಪಡ್ಯೋಡಿ, ಸದಾನಂದ ಪೂಜಾರಿ ಉಂಗಿಲ ಬೈಲು, ಕಟ್ಟೂರು ಶಿವ ಭಟ್, ಶಂಕರ ಭಟ್, ಸಂತು, ಇಂಜಿನಿಯರ್ ರಾಕೇಶ್, ಗುತ್ತಿಗೆದಾರ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುರೋಹಿತ ಪದ್ಮನಾಭ ಜೋಶಿ ಭೂಮಿ ಪೂಜನ ನೆರವೇರಿಸಿದರು. ಕೂಡಲೇ ಅಣೆಕಟ್ಟಿಗೆ ಹಲಗೆ ಇಳಿಸಲಾಗುವುದು ಹಾಗೂ ಮುಂದಿನ ಮಳೆಗಾಲದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್ ತಿಳಿಸಿದರು. ಪತ್ರಕರ್ತ ದೀಪಕ ಆಠವಳೆ ಸ್ವಾಗತಿಸಿ, ವಂದಿಸಿದರು.

ರಸ್ತೆ ಅಭಿವೃದ್ಧಿ ಶಾಸಕರಿಗೆ ಬೇಡಿಕೆ: ಇದೇ ವೇಳೆ ಸ್ಥಳೀಯರು, ಬಳಂಜವನ್ನು ಸಂಪರ್ಕಿಸುವ ನಡಾಯಿ – ಆನೆಪಿಲ ಮಣ್ಣಿನ ರಸ್ತೆಯನ್ನು ಸರ್ವ‌ಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Related posts

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya
error: Content is protected !!