22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು.

ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ ಆಶ್ಲೇಷ ಬಲಿ,ದೇವರ ಬಲಿ ಉತ್ಸವ,ದುರ್ಗಾ ನಮಸ್ಕಾರ ಪೂಜೆ, ಅಯ್ಯಪ್ಪ ದೇವರ ವಿಶೇಷ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಹಾಗೂ ಪಂಚಶ್ರೀ ಮಕ್ಕಳ ಕುಣಿತ ಭಜನಾ ಮಂಡಳಿ ನಾಲ್ಕೂರು ಮತ್ತು ಪಂಚಶ್ರೀ ಮಹಿಳಾ ಭಜನಾ ಮಂಡಳಿ ನಾಲ್ಕೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಇವರ ಭಕ್ತಿ ಗಾನ ವೈಭವ ಮನ ಸೆಳೆಯಿತು. ವ್ಯಾಘ್ರ ಚಾಮುಂಡಿ ದೈವದ ನರ್ತನ ಸೇವೆ,ದೈವ ದೇವರ ಭೇಟಿ ನಡೆಯಿತು. ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಸ್ವಾಗತಿಸಿ, ಪ್ರಸಾದ ನೀಡಿದರು.

Related posts

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya
error: Content is protected !!