September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು.

ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ ಆಶ್ಲೇಷ ಬಲಿ,ದೇವರ ಬಲಿ ಉತ್ಸವ,ದುರ್ಗಾ ನಮಸ್ಕಾರ ಪೂಜೆ, ಅಯ್ಯಪ್ಪ ದೇವರ ವಿಶೇಷ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಹಾಗೂ ಪಂಚಶ್ರೀ ಮಕ್ಕಳ ಕುಣಿತ ಭಜನಾ ಮಂಡಳಿ ನಾಲ್ಕೂರು ಮತ್ತು ಪಂಚಶ್ರೀ ಮಹಿಳಾ ಭಜನಾ ಮಂಡಳಿ ನಾಲ್ಕೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಇವರ ಭಕ್ತಿ ಗಾನ ವೈಭವ ಮನ ಸೆಳೆಯಿತು. ವ್ಯಾಘ್ರ ಚಾಮುಂಡಿ ದೈವದ ನರ್ತನ ಸೇವೆ,ದೈವ ದೇವರ ಭೇಟಿ ನಡೆಯಿತು. ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಸ್ವಾಗತಿಸಿ, ಪ್ರಸಾದ ನೀಡಿದರು.

Related posts

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಕೊಯ್ಯೂರು: ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!