25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು.

ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ ಆಶ್ಲೇಷ ಬಲಿ,ದೇವರ ಬಲಿ ಉತ್ಸವ,ದುರ್ಗಾ ನಮಸ್ಕಾರ ಪೂಜೆ, ಅಯ್ಯಪ್ಪ ದೇವರ ವಿಶೇಷ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಹಾಗೂ ಪಂಚಶ್ರೀ ಮಕ್ಕಳ ಕುಣಿತ ಭಜನಾ ಮಂಡಳಿ ನಾಲ್ಕೂರು ಮತ್ತು ಪಂಚಶ್ರೀ ಮಹಿಳಾ ಭಜನಾ ಮಂಡಳಿ ನಾಲ್ಕೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಇವರ ಭಕ್ತಿ ಗಾನ ವೈಭವ ಮನ ಸೆಳೆಯಿತು. ವ್ಯಾಘ್ರ ಚಾಮುಂಡಿ ದೈವದ ನರ್ತನ ಸೇವೆ,ದೈವ ದೇವರ ಭೇಟಿ ನಡೆಯಿತು. ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಗಳು ಸ್ವಾಗತಿಸಿ, ಪ್ರಸಾದ ನೀಡಿದರು.

Related posts

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!