September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜಿ ಇಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ, ಉದ್ಯಮಿ ಶೇಖರ್ ದೇವಾಡಿಗ ಇವರ ಸಹಕಸರದೊಂದಿಗೆ ಎಲ್.ಕೆ.ಜಿ ಮತ್ತು ಯು‌‌.ಕೆ.ಜಿ ಮಕ್ಕಳಿಗೊಸ್ಕರ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸವನ್ನು ದೀಪ್ತಿ ಶೇಖರ್ ದೇವಾಡಿಗ ಪಾಲಬೆ ಜ 5ರಂದು ನೇರವೇರಿಸಿ ಶುಭಕೋರಿದರು.

ಬಳಂಜ‌ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ‌ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ಕೃಷ್ಟ ಮಟ್ಟದ ಶಿಕ್ಷಣ ಸಿಗಬೇಕೆಂಬುದು ಶಿಕ್ಷಣ ಟ್ರಸ್ಟ್ ನ‌ ಉದ್ದೆಶವಾಗಿದೆ. ಈಗಾಗಲೇ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗಿದೆ.‌ ಮುಂದೆ ಇನ್ನಷ್ಟು ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದರು.

ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರ್ಚಕ ಮಂಜುನಾಥ ಭಟ್ ವೈದಿಕ ವಿಧಿ ವಿಧಾನ ನೇರವೇರಿಸಿದರು.

ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ‌ ಅಧ್ಯಕ್ಷೆ ಶೋಭಾ ಕುಲಾಲ್, ಪಿಡಿಓ ಶಶಿಕಲಾ, ಬಳಂಜ‌ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ರತ್ನರಾಜ್ ಜೈನ್, ಟ್ರಸ್ಟಿಗಳಾದ ಸಂತೋಷ್ ಕುಮಾರ್ ಕಾಪಿನಡ್ಕ,ವಿನು ಬಳಂಜ, ರಾಕೇಶ್ ಹೆಗ್ಡೆ,ಪ್ರವೀಣ್ ಕುಮಾರ್ ಹೆಚ್.ಎಸ್, ಪ್ರಮೋದ್ ಕುಮಾರ್ ಹೊಸಮನೆ , ಬಳಂಜ ಗ್ರಾ.ಪಂ‌ ಸದಸ್ಯರಾದ ಯಕ್ಷಿತಾ ದೇವಾಡಿಗ, ಲೀಲಾವತಿ, ಬೇಬಿ ನಾರಾಯಣ, ರವೀಂದ್ರ ಬಿ ಅಮೀನ್, ಜ್ಯೋತಿ ಮಹಿಳಾ ಮಂಡಲದ ಅಧ್ಯಕ್ಷೆ ಚೇತನಾ ಜೈನ್, ಉಮಾಮಹೇಶ್ವರ ಯುವಕ ಮಂಡಳ ಅಧ್ಯಕ್ಷ ಸುಕೇಶ್ ಜೈನ್, ರಮಾನಾಥ ಶೆಟ್ಟಿ, ಪುರಂದರ ಪೂಜಾರಿ, ಪ್ರವೀಣ್ ಪೂಜಾರಿ, ಗಣೇಶ್ ದೇವಾಡಿಗ, ಶಿಕ್ಷಕಿಯರಾದ ಹೇಮಾ, ಕೀರ್ತಿ, ಶ್ರಿಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕಿ ಪದ್ಮಾವತಿ, ಸೇವಾನಿರತರಾದ ಪ್ರಮಿಳಾ, ಉಮಾವತಿ ಹಾಗೂ ಇತರರು ಉಪಸ್ಥಿತರಿದ್ದರು.

ಬಳಂಜ ಶಾಲಾ ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಸ್ವಾಗತಿಸಿ, ವಂದಿಸಿದರು.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!