July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

ಬೆಳ್ತಂಗಡಿ : ವಿಶೇಷ ತೀವ್ರ ಪರಿಷ್ಕರಣೆ (SIR) ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೆ ಎಸ್‌ಡಿಪಿಐ ನಿಯೋಗ ದೂರು ನೀಡಿತು.

ಚುನಾವಣಾ ಆಯೋಗ ತಂದಂತಹ (SIR) Special Intensive Revision -(ವಿಶೇಷ ತೀವ್ರ ಪರಿಷ್ಕರಣೆ) ವಿಚಾರದಲ್ಲಿ ತಾವುಗಳು ನೇಮಿಸಲ್ಪಟ್ಟ (BLO) ಬೂತ್ ಮಟ್ಟದ ಅಧಿಕಾರಿಗಳ ಮಾಹಿತಿ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ತಾವುಗಳು ಈ ಕೂಡಲೆ ಮಧ್ಯ ಪ್ರವೇಶಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ನಗರ ಸಮಿತಿ ಅಧ್ಯಕ್ಷ ರಿಯಾಝ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಶುಕುರ್ ಕುಪ್ಪೆಟ್ಟಿ ಹಾಗೂ ಇಸ್ಮಾಯಿಲ್ ಸಂಜಯನಗರ ಉಪಸ್ಥಿತರಿದ್ದರು.

Related posts

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!