25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶವನ್ನು ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅರ್ಜಿಯಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ, ಬೆಳ್ತಂಗಡಿ ಪೊಲೀಸ್ ‘ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

1 ವರ್ಷದ ಅವಧಿಗೆ ತಿಮರೋಡಿ ಅವರನ್ನು ಗಡೀಪಾರು ಮಾಡಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಪುತ್ತೂರು ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ತಾಂತ್ರಿಕ ಹಾಗೂ ಕಾನೂನು ಪ್ರಕ್ರಿಯೆಗಳ ಪಾಲನೆ ಮಾಡದ ಕಾರಣ ಗಡಿಪಾರು ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಹೊಸದಾಗಿ ಆದೇಶ ಹೊರಡಿಸಬಹುದು ಎಂದು ಹೇಳಿತ್ತು. ಅದರಂತೆ, ಹೊಸದಾಗಿ ಗಡೀಪಾರು ಆದೇಶ ಹೊರಡಿಸಲಾಗಿದೆ. ಅದನ್ನು ತಿಮರೋಡಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!