July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಯಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲರ ಮುಂದಾಳತ್ವದಲ್ಲಿ ನಡೆಯಿತು.

ಘಂಟಾ ಗೋಪುರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರವರು ನೆರವೇರಿಸಲಿದ್ದಾರೆ ಎಂದವರು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು,ಪಿಎಚ್ ನಿತ್ಯಾನಂದ ಶೆಟ್ಟಿ,ಹರೀಶ್ ಆಚಾರ್ಯ, ಭರತೇಶ್ ಜರ್ಮನಿ, ಸುಭಾಶ್ಚಂದ್ರ ರೈ ಪಡ್ಯೋಡಿ,ಮೋಹನದಾಸ್ ಎ, ಧರ್ಣಪ್ಪ ಪೂಜಾರಿ ದೊರಿಂಜ, ಅಭಿಷೇಕ್ ನೀರಲ್ಕೆ,ಪ್ರಸಾದ್ ಅಬ್ಬನಬಾಕ್ಯಾರು, ಜಿನ್ನಪ್ಪ ನೀರಲ್ಕೆ, ರಘು ದೇವಾಡಿಗ, ವಿಜಯ ಕುಮಾರ್ ಜೈನ್, ಸುಪ್ರೀತ್ ಜೈನ್, ಶಶಿಕಾಂತ್ ನಾಯಕ್, ಪೂರ್ಣಿಮಾ ಪ್ರಮೋದ್, ಆಟೋ ಚಾಲಕ ಸಂಘದ ಅಧ್ಯಕ್ಷ ಕೊರಗಪ್ಪ, ಕಿರಣ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Related posts

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya
error: Content is protected !!