25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲುವೆ ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಜ.6 ರಂದು ಬಾವಲಿಗುಂಡಿ ಪರಿಸರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಅನುದಾನ ಬಿಡುಗಡೆಗೊಳಿಸಲು ಶ್ರಮಿಸಿದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಹಾಲು ಎರೆದು ಕಾಮಗಾರಿಗೆ ಚಾಲನೆ ನೀಡಿದರು.
ಅಳದಂಗಡಿ ಗ್ರಾ.ಪಂ.ಸದಸ್ಯ ಪ್ರವೀಣ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ, ಸ್ಥಳೀಯರಾದ ಮುರಲೀಧರ ಗೋಖಲೆ, ಪ್ರಭಾಕರ ಆಠವಳೆ, ನಿರಂಜನ ಜೋಶಿ, ರಾಜೇಂದ್ರ ಗೋಖಲೆ, ಅಮರೇಶ ಜೋಶಿ, ಪ್ರಶಾಂತ ನಾತು, ಲೋಲಾಕ್ಷ ಶೆಟ್ಟಿ ಪಡ್ಯೋಡಿ, ಸದಾನಂದ ಪೂಜಾರಿ ಉಂಗಿಲ ಬೈಲು, ಕಟ್ಟೂರು ಶಿವ ಭಟ್, ಶಂಕರ ಭಟ್, ಸಂತು, ಇಂಜಿನಿಯರ್ ರಾಕೇಶ್, ಗುತ್ತಿಗೆದಾರ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುರೋಹಿತ ಪದ್ಮನಾಭ ಜೋಶಿ ಭೂಮಿ ಪೂಜನ ನೆರವೇರಿಸಿದರು. ಕೂಡಲೇ ಅಣೆಕಟ್ಟಿಗೆ ಹಲಗೆ ಇಳಿಸಲಾಗುವುದು ಹಾಗೂ ಮುಂದಿನ ಮಳೆಗಾಲದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್ ತಿಳಿಸಿದರು. ಪತ್ರಕರ್ತ ದೀಪಕ ಆಠವಳೆ ಸ್ವಾಗತಿಸಿ, ವಂದಿಸಿದರು.

ರಸ್ತೆ ಅಭಿವೃದ್ಧಿ ಶಾಸಕರಿಗೆ ಬೇಡಿಕೆ: ಇದೇ ವೇಳೆ ಸ್ಥಳೀಯರು, ಬಳಂಜವನ್ನು ಸಂಪರ್ಕಿಸುವ ನಡಾಯಿ – ಆನೆಪಿಲ ಮಣ್ಣಿನ ರಸ್ತೆಯನ್ನು ಸರ್ವ‌ಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!