23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳ್ತಂಗಡಿ: ಬಡಗಕಾರಂದೂರು( ಅಳದಂಗಡಿ) ಗ್ರಾಮದ ಫಲ್ಗುಣಿ ನದಿಯ ಬಾವಲಿಗುಂಡಿ ಎಂಬಲ್ಲಿರುವ ಕಿಂಡಿ ಅಣೆಕಟ್ಟಿನಿಂದ ಪಶ್ಚಿಮದ ಕಡೆಗಿನ ಸೂಳಬೆಟ್ಟು ವಾಳ್ಯದವರ ಕೃಷಿ ನೀರಾವರಿಗೆ ಅನುಕೂಲವಾಗಲೆಂದು ಕಾಲುವೆ ನಿರ್ಮಾಣಕ್ಕೆ ರಾಜ್ಯದ ಸಣ್ಣ ನೀರಾವರಿ ಇಲಾಖೆಯಿಂದ ರೂ. 3 ಕೋಟಿ ಅನುದಾನ ಬಿಡುಗಡೆಯಾಗಿದೆ. ಕಾಲುವೆ ನಿರ್ಮಾಣ ಕಾರ್ಯದ ಪೂರ್ವಭಾವಿಯಾಗಿ ಜ.6 ರಂದು ಬಾವಲಿಗುಂಡಿ ಪರಿಸರದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಅನುದಾನ ಬಿಡುಗಡೆಗೊಳಿಸಲು ಶ್ರಮಿಸಿದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಅವರು ಹಾಲು ಎರೆದು ಕಾಮಗಾರಿಗೆ ಚಾಲನೆ ನೀಡಿದರು.
ಅಳದಂಗಡಿ ಗ್ರಾ.ಪಂ.ಸದಸ್ಯ ಪ್ರವೀಣ, ಬಳಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ವಿಶ್ವನಾಥ ಡೋಂಗ್ರೆ, ಸ್ಥಳೀಯರಾದ ಮುರಲೀಧರ ಗೋಖಲೆ, ಪ್ರಭಾಕರ ಆಠವಳೆ, ನಿರಂಜನ ಜೋಶಿ, ರಾಜೇಂದ್ರ ಗೋಖಲೆ, ಅಮರೇಶ ಜೋಶಿ, ಪ್ರಶಾಂತ ನಾತು, ಲೋಲಾಕ್ಷ ಶೆಟ್ಟಿ ಪಡ್ಯೋಡಿ, ಸದಾನಂದ ಪೂಜಾರಿ ಉಂಗಿಲ ಬೈಲು, ಕಟ್ಟೂರು ಶಿವ ಭಟ್, ಶಂಕರ ಭಟ್, ಸಂತು, ಇಂಜಿನಿಯರ್ ರಾಕೇಶ್, ಗುತ್ತಿಗೆದಾರ ವಸಂತ ಪೂಜಾರಿ ಉಪಸ್ಥಿತರಿದ್ದರು.

ಪುರೋಹಿತ ಪದ್ಮನಾಭ ಜೋಶಿ ಭೂಮಿ ಪೂಜನ ನೆರವೇರಿಸಿದರು. ಕೂಡಲೇ ಅಣೆಕಟ್ಟಿಗೆ ಹಲಗೆ ಇಳಿಸಲಾಗುವುದು ಹಾಗೂ ಮುಂದಿನ ಮಳೆಗಾಲದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್ ತಿಳಿಸಿದರು. ಪತ್ರಕರ್ತ ದೀಪಕ ಆಠವಳೆ ಸ್ವಾಗತಿಸಿ, ವಂದಿಸಿದರು.

ರಸ್ತೆ ಅಭಿವೃದ್ಧಿ ಶಾಸಕರಿಗೆ ಬೇಡಿಕೆ: ಇದೇ ವೇಳೆ ಸ್ಥಳೀಯರು, ಬಳಂಜವನ್ನು ಸಂಪರ್ಕಿಸುವ ನಡಾಯಿ – ಆನೆಪಿಲ ಮಣ್ಣಿನ ರಸ್ತೆಯನ್ನು ಸರ್ವ‌ಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!