ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

ಬೆಳ್ತಂಗಡಿ: ಐದು ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ.ಕೆ ವಸಂತ ಬಂಗೇರ ಅವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ 65 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಪ್ರೌಢಾಶಾಲಾ ವಿಭಾಗದ ಬಾಲಕ ಬಾಲಕಿಯರ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಜ.15 ರಂದು ಬಂಡಿಮಠ ಮೈದಾನ ಮದ್ದಡ್ಕದಲ್ಲಿ ಆಯೋಜಿಸಲಾಗಿದೆ ಎಂದು ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ಹೇಳಿದರು.

ಅವರು ಜ 6ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇಗಾಗಲೇ ಕಬಡ್ಡಿಯ ಯಶಸ್ವಿಗೆ ಪೂರ್ವ ಸಿದ್ದತೆಗಳು ಭರದಿಂದ ಸಾಗುತ್ತಿದೆ.ಕಳೆದ ವರ್ಷ ಜಿಲ್ಲಾ ಮಟ್ಟದ ಪಂದ್ಯಾವಳಿ ಆಯೋಜಿಸಿದ್ದು ಈ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಕೂಟ ಆಯೋಜಿಸಲಾಗುತ್ತಿದೆ ಎಂದರು.

ಪುರುಷರ ಮುಕ್ತ ವಿಭಾಗ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ವಿಭಾಗದಲ್ಲಿ ವಿಜೇತ ತಂಡಗಳಿಗೆ
ನಗದು& ಟ್ರೋಫಿ ಸಿಗಲಿದೆ.ಬೆಸ್ಟ್ ರೈಡರ್, ಬೆಸ್ಟ್ ಕ್ಯಾಚರ್, ಆಲ್ ರೌಂಡರ್ ಹಾಗೂ ಶಿಸ್ತಿನ ತಂಡಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಟೂರ್ನಿಯಲ್ಲಿ ಭಾಗವಹಿಸಿದ ಪ್ರತಿಯೊಂದು ಹೈಸ್ಕೂಲಿನ ತಂಡಗಳಿಗೆ ಶಾಶ್ವತ ಫಲಕ ಮತ್ತು ಸೆಮಿಫೈನಲ್ ತಲುಪಿದ ತಂಡಗಳ ಸದಸ್ಯರಿಗೆ ಪ್ರಶಸ್ತಿ ಪತ್ರ ನೀಡಲಾಗುತ್ತದೆ.ಬೆಳಿಗ್ಗೆಯಿಂದ ಮರುದಿನ ಬೆಳಿಗ್ಗೆಯವರೆಗೆ ವಿವಿಧ ವಿಭಾಗದಲ್ಲಿ ಕಬಡ್ಡಿ ಪಂದ್ಯಾವಳಿಯು ನಡೆಯಲಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿ.ಕೆ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ,ಆರಿಕೋಡಿ ಧರ್ಮದರ್ಶಿ ಹರೀಶ್ ,ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಸಂಸ್ಥೆ ರಾಕೇಶ್ ಮಲ್ಲಿ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಂಗೇರ ಬ್ರಿಗೇಡ್ ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಸಲೀಂ ಗುರುವಾಯನಕೆರೆ,ಕೋಶಾಧಿಕಾರಿ ರಾಜಶ್ರೀ ರಮಣ್, ಜೊತೆ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya
error: Content is protected !!