September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

ಉಜಿರೆ : ಉಡುಪಿ ಜಿಲ್ಲೆಯ ಪೆರಂಪಳ್ಳಿಯಲ್ಲಿ ಪವರ್ ಫ್ರೆಂಡ್ಸ್ ಪೆರಂಪಳ್ಳಿ ಸಂಯುಕ್ತ ಆಶ್ರಯ ಹಾಗೂ ಅನಿಲ್ ಗೋನ್ಸಾಲ್ವಿಸ್ ನೇತೃತ್ವದಲ್ಲಿ ನಡೆದಂತಹ ‘ಪವರ್ ಟ್ರೋಫಿ – 2026 ಅಂತರ್ ಜಿಲ್ಲಾ’ ಬಾಲಕಿಯರ ಮುಕ್ತ ವಿಭಾಗದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿ ಶ್ರೀಯಾ ಉತ್ತಮ ಅಟ್ಯಾಕರ್ , ವಿದ್ಯಾರ್ಥಿನಿ ಪ್ರಿಯಾಂಕ ಬೆಸ್ಟ್ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು. ತಂಡದಲ್ಲಿ ವಿದ್ಯಾರ್ಥಿಗಳಾದ ಹರಿಣಿ, ಐಶ್ವರ್ಯ, ಅಂಜಲಿ, ಇಂಚರ, ಸಾಕ್ಷಿ, ಸ್ಮಿತಾ, ಲಾಸ್ಯ, ಅಪೂರ್ವ, ಸ್ಮಿತೂಜ್ ಮತ್ತು ಶಗುಣ್ ಪಾಲ್ಗೊಂಡಿದ್ದರು.
ತಂಡಕ್ಕೆ ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್ ತರಬೇತಿಯನ್ನು ನೀಡಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!