26.2 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

ಮಚ್ಚಿನ: ಶ್ರೀ ಕ್ಷೇತ್ರ ಬಳ್ಳಮಂಜದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥ ಮಂಟಪದ ನಿರ್ಮಾಣದ ನಿಧಿ ಕುಂಭ ಸ್ಥಾಪನೆ ಪೂರ್ವಕ ಷಡಾಧಾರ ಪ್ರತಿಷ್ಠೆ ಹಾಗೂ ಅಷ್ಟೇಷ್ಟಕ ಸ್ಥಾಪನೆ ಪೂರ್ವಕ ಗರ್ಭನ್ಯಾಸವು ಜ.04 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ. ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಂಗಳೂರು ಶ್ರೀ ಕ್ಷೇತ್ರ ಶರವು ಮೊಕ್ತೇಸರರು ಶ್ರೀ ಶರವು ರಾಘವೇಂದ್ರ ಶಾಸ್ತ್ರಿ, ಶಾಸಕ ಹರೀಶ್ ಪೂಂಜ , ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗ್ಲೋಬಲ್ ಹೆಡ್ ಇನ್ಫೋಸಿಸ್ ಐ ಟಿ ಉಪಾಧ್ಯಕ್ಷ ರಾಧಾಕೃಷ್ಣ ಎಸ್, ಪುರಂದರ ರೈ ಮಿತ್ರಂಪಾಡಿ ಕೃಷಿಕರು ಪುತ್ತೂರು, ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ , ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ , ಯೋಗೀಶ್ ಪೂಜಾರಿ ಕಡ್ತಿಲ ಉಪಸ್ಥಿತರಿದ್ದರು.

ದೇವಾಲಯದ ಸಿಂಬದಿ ವರ್ಗ ಊರಿನ ಗಣ್ಯರು ಕ್ಷೇತ್ರದ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.
✍️ಹರ್ಷ ಬಳ್ಳಮಂಜ

Related posts

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತ‌ರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya
error: Content is protected !!