23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

ಬೆಳ್ತಂಗಡಿ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುರ್ತು ಸ್ಪಂದನಾ ತಂಡ ಬೆಳ್ತಂಗಡಿ ಇದರ ಸ್ವಯಂಸೇವಕರು ಅಂತಾರಾಷ್ಟ್ರೀಯ ಫ್ರೀ ಡ್ರೈವಿಂಗ್ (ಈಜು)ತರಬೇತಿಯಲ್ಲಿ ಪಾಲ್ಗೊಂಡಿರುತ್ತಾರೆ.


ಬಂಟ್ವಾಳ ತಾಲೂಕು ವಿಟ್ಲ ಸಮೀಪದ ಅಡ್ಯನಡ್ಕದ ವಾರಾಣಸಿ ಫಾರ್ಮ್ನಲ್ಲಿ ಅಂತಾರಾಷ್ಟ್ರೀಯ ಫ್ರೀ ಡ್ರೈವಿಂಗ್ ಕೋಚಸ್ ಅಪ್ ಏಷ್ಯಾದ ಸ್ಥಾಪಕ ಜೇರೋಲೆನ್ ಎಲೌಟ್ ಇವರಿಂದ 7 ದಿನದ ತರಬೇತಿ ಕಾರ್ಯಕ್ರಮ ಆರಂಭಗೊಂಡಿದೆ.
ಈಜುಗಾರಿಕೆಯಲ್ಲಿ 30 ವರ್ಷಗಳ ಸುದೀರ್ಘ ಅನುಭವ ಪಡೆದ ಇವರು ನೆದರಲ್ಯಾಂಡ್ ದೇಶದಿಂದ ತರಬೇತಿ ನೀಡಲು ಆಗಮಿಸಿರುತ್ತಾರೆ.


ಈಜುಗಾರಿಕೆಯ ಮುಂಚೆ ವಹಿಸಬೇಕಾದ ಎಚ್ಚರಿಕೆ ಕ್ರಮಗಳು, ಈಜುವಾಗ ಆರೋಗ್ಯದಲ್ಲಿ ಆಗುವ ಏರುಪೇರುಗಳು, ಅದಕ್ಕೆ ಆರೋಗ್ಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಯ ಮಾಹಿತಿಯೊಂದಿಗೆ ಈಜುಗಾರಿಕೆಯಲ್ಲಿ ವಿವಿಧ ಆಯಾಮಗಳ ಪ್ರಾತ್ಯಕ್ಷತೆಯನ್ನು ಈಜು ಕೊಳದಲ್ಲಿ ಮಾಡಿಸಿರುತ್ತಾರೆ.


ತರಬೇತಿ ಸಹಾಯಕರಾಗಿ ಜೇಕೊಬ್, ವಿನಯ್, ಪ್ರಿಯಾಂಕಾ ಸಹಕಾರ ನೀಡಿರುತ್ತಾರೆ.
ತರಬೇತಿಯಲ್ಲಿ ಬೆಳ್ತಂಗಡಿ ತಾಲೂಕು ಸಮಿತಿ ಮಾಸ್ಟರ್ ಅವಿನಾಶ್ ಭಿಡೆ, ಸ್ವಯಂ ಸೇವಕರಾದ ಸಚಿನ್ ಭೀಡೆ, ರಮೇಶ್, ಅನಿಲ್, ಜಯರಾಮ್, ಸತೀಶ್ ನೆರಿಯ, ಶರತ್ ನಿಂತಿಕಲ್ಲು ತರಬೇತಿಯಲ್ಲಿ ಪಾಲ್ಗೊಂಡಿದ್ದು, ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಕಿಶೋರ್ ಕುಮಾರ್ ಮಾರ್ಗದರ್ಶನ ನೀಡಿರುತ್ತಾರೆ.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!