23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

ಉಜಿರೆ: ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಉಜಿರೆ ಗ್ರಾಮದ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ಸಿ. ಆರ್.ಪಾಟೀಲ್, ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಅನುಭವ ಹಂಚಿಕೆ ಕಾರ್ಯಕ್ರಮ ಜ.6ರಂದು ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಯಿಂದ ವಿಡಿಯೊ ಕಾನ್ಸರೆನ್ಸ್ ಮೂಲಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮತ್ತು ಜಿಪಂ ಸಿಇಒ ನರ್ವಾಡೆ ವಿನಾಯಕ ಕಾರ್ಭಾರಿ ಮಾಹಿತಿ ನೀಡಿದರು.

ಯೋಜನೆ ‘ಗ್ರಾಮೀಣಾಭಿವೃದ್ಧಿ ಗಳನ್ನು ಸಮರ್ಪಕವಾಗಿ ಅನುಷ್ಠಾನ ತರಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗ ಪಡೆಯ ಬೇಕು. ಈ ಯೋಜನೆಗಳನ್ನು ಜಾರಿಗೆ ತರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಯೋಜನೆ ಎಂಬುದನ್ನು ಜನರಿಗೆ ತಿಳಿಸಬೇಕು,” ಎಂದು ಸಚಿವ ಸೋಮಣ್ಣ ಹೇಳಿದರು.

ದೇಶದ ಆಯ್ದ ರಾಜ್ಯಗಳ ಮಲ ತ್ಯಾಜ್ಯ ನಿರ್ವಹಣೆ ಕುರಿತು ನಡೆದ ಸಂವಾದದಲ್ಲಿ ಕರ್ನಾಟಕದಿಂದ ಉಜಿರೆ ಗ್ರಾಪಂ ಮಾತ್ರ ಆಯ್ಕೆ ಮಾಡಲಾಗಿತ್ತು. ಗ್ರಾಮದಲ್ಲಿ ಅನುಷ್ಠಾನ ಮಾಡಿರುವ ಮಲ ತ್ಯಾಜ್ಯ ಘಟಕ ಬಗ್ಗೆ ಪಿಪಿಟಿ ಮೂಲಕ ಸಚಿವರಿಗೆ ಅನುಭವ ಪ್ರಸ್ತುತಪಡಿಸಲಾಯಿತು.

ಉಜಿರೆ ಗ್ರಾಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಒ ಪ್ರಕಾಶ್ ಶೆಟ್ಟಿ ಸಂಜೀವಿನಿ ಒಕ್ಕೂಟದ ಸದಸ್ಯೆ ದೇಜಮ್ಮ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಕಾರಿ ಎಂಜಿನಿಯರ್ ಜೈಪ್ರಕಾಶ್, ಸ್ವಚ್ಛಭಾರತ್ ಸಮಾಲೋಚಕರು ಉಪಸ್ಥಿತರಿದ್ದರು.

Related posts

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
error: Content is protected !!