ಕೊಕ್ಕಡ: ಇಲ್ಲಿನ ಹಳ್ಳಿಂಗೇರಿಯಲ್ಲಿರುವ ಶ್ರೀ ಅಯ್ಯಪ್ಪ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇಲ್ಲಿಗೆ ಧಾರ್ಮಿಕ ಮುಖಂಡ ಸಮಾಜ ಸೇವಕ ಕಿರಣ್ ಚಂದ್ರಪುಷ್ಪಗಿರಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಅಲ್ಲದೆ ಈ ಜೀರ್ಣೋದ್ದಾರ ಕಾರ್ಯಕ್ಕೆ ತಮ್ಮಿಂದಾದ ಸಹಾಯವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಅಧ್ಯಕ್ಷ ರುಕ್ಮಯ ಮಡಿವಾಳ, ಉಪಾಧ್ಯಕ್ಷ ಲೋಕೇಶ್ ಕೆಂಪಕೋಡಿ , ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸಮಿತಿ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ ,ನೀಲಯ, ಸುಬ್ರಹ್ಮಣ್ಯ ಆಚಾರ್ಯ, ಶಶಿ ಕೊಕ್ಕಡ, ದೇವದಾಸ್ ಕಾವು, ಧನಂಜಯ ಕಾವು , ರಾಘವ ಭಂಡಾರಿ, ಸಚಿನ್ ಭಜ ಹಾಗೂ ಊರಿನವರು ಉಪಸ್ಥಿತರಿದ್ದರು.











