ಗೇರುಕಟ್ಟೆ: ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ 30ರವರಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ, ವಿಧಿ ವಿಧಾನಗಳೊಂದಿಗೆ ವ್ಯವಸ್ಥಾಪನಾ ಸಮಿತಿ, ಭಕ್ತ ವೃಂದದವರು ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಹರೀಶ್ ಕುಮಾರ್, ಸದಸ್ಯರಾದ ಹರೀಶ್ ಗೌಡ ಕೆ, ನೀನಾ ಕುಮಾರ್, ಅರುಣ್ ಶೆಟ್ಟಿ, ಮೋಹಿನಿ, ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಮೆದಿನ, ಕಳಿಯ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ದನ ಗೌಡ ಕೆ., ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಡಾ. ಅನಂತ ಭಟ್, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಅಂಭಾ ಬಿ. ಆಳ್ವ, ದಿನೇಶ್ ಗೌಡ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ, ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಗಣೇಶ ನಾಳ, ಶ್ರೀ ದುರ್ಗಾ ಮಾತೃ ಮಂಡಳಿ ಕಾರ್ಯದರ್ಶಿ ವಿನೋದ, ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಹೆಚ್., ಪ್ರಮುಖ ರಾದ ಪೂವಪ್ಪ ಶೆಟ್ಟಿ, ಉಮಾನಾಥ ಶೆಟ್ಟಿ, ವಿಜಯ ಗೌಡ ಕೆ, ಸುಧಾಕರ ಮಜಲು,ಸತೀಶ್ ಭಂಡಾರಿ ನಾಳ, ಮಹಾಲಕ್ಷ್ಮಿ, ವಿಕ್ರಮ್ ಜೆ. ಎನ್., ಜಗನ್ನಾಥ ವಂಜಾರೆ, ಗೋಪಾಲ ಮುದ್ದುಂಜ, ಸತೀಶ್ ಶೆಟ್ಟಿ, ಸದಾಶಿವ ಗಾಣಿಗ, ಕೆ. ಎನ್. ಗೌಡ, ಸೋಮಣ್ಣ ಗೌಡ, ಮೋಹನ ಗೌಡ, ಗಿರೀಶ್ ಶೆಟ್ಟಿ, ಪ್ರಮೀಳಾ, ಜಾತ್ರಾ ಮಹೋತ್ಸವದ ವಿವಿಧ ಉಪ ಸಮಿತಿ ಪದಾಧಿಕಾರಿಗಳು ಸದಸ್ಯರು, ಅರ್ಚಕ ವೃಂದ, ದೇವಸ್ಥಾನದ ಸಿಬ್ಬಂದಿಗಳು, ವಿವಿಧ ಸಂಘ ಸಂಸ್ಥೆಯ ಸದಸ್ಯರು, ಊರ ಪರವೂರ ಭಕ್ತರು ಹಾಜರಿದ್ದರು.











