ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿಗೆ ತಲಾ ರೂ.25 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ.

ಅನುಮೋದನೆಗೊಂಡ ಕಾಮಗಾರಿಗಳ ವಿವರ: ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ. , ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ, ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!