March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶ್ರೀಮತಿ ಶಾರದ ಮತ್ತು ಶೇಖರ ಶೆಟ್ಟಿ ದಂಪತಿಯ ಪುತ್ರಿ ಶ್ರದ್ದಾ ಶೆಟ್ಟಿಯವರು ಜ. 06 ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ತನಗೆ ಸಿಕ್ಕಿದ ಪ್ರಶಸ್ತಿಯೊಂದಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ಪ್ರಸ್ತುತ ಶ್ರದ್ದಾ ಶೆಟ್ಟಿಯವರು ಉಜಿರೆ ಎಸ್. ಡಿ. ಎಂ ಕಾಲೇಜಿನಲ್ಲಿ ಬಿಎಡ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇವರು ತನ್ನ ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುತ್ತಿದ್ದರು. ಇತ್ತೀಚಿಗೆ ಬೃಹದಾಕಾರದ ಹೂವಿನ ರಂಗೋಲಿಯನ್ನು ಬಿಡಿಸಿ ವಿಶ್ವದಾಖಲೆ ನಿರ್ಮಿಸಿದರು. ಈ ಹೂವಿನ ರಂಗೋಲಿ ಬಿಡಿಸಲು ಸೌತಡ್ಕದಿಂದಲೇ ಹೂವುಗಳನ್ನು ಕೊಂಡೋಗಿರುವುದು ಕೂಡಾ ಪ್ರಶಸ್ತಿ ಲಭಿಸಲು ಮತ್ತು ವಿಶ್ವ ದಾಖಲೆ ನಿರ್ಮಿಸಲು ಕಾರಣವಾಯಿತೆಂದು ಪ್ರಶಸ್ತಿ ವಿಜೇತೆ ಕುಮಾರಿ ಶ್ರದ್ದಾ ಶೆಟ್ಟಿರವರ ಮನದಾಳದ ಮಾತಾಗಿತ್ತು.

ಪ್ರಸ್ತುತ ಇವರು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಇಲ್ಲಿಯ ಭಜಕಿಯಾಗಿರುತ್ತಾರೆ. ಈಕೆಯ ಸಾಧನೆಗೆ ಇನ್ನೊಂದು ಗರಿಮೆ ಕೂಡಾ ಸೇರಿಕೊಂಡಿದೆ. ಇವರ ಸಾಧನೆ ಎಂದರೆ 1 ಗಂಟೆ 39 ನಿಮಿಷದಲ್ಲಿ 8 ಫೀಟ್ ಹೂವಿನ ರಂಗೊಲಿಯನ್ನು ತಯಾರಿಸಿ, ದಾಖಲೆ ನಿರ್ಮಿಸಿದ್ದು ಈ ಶ್ರಮದ ಫಲವಾಗಿ ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ,ಮುಂದಕ್ಕೆ ಇದೇ ಸಾಧನೆಗೆ ನವಂಬರ್ ತಿಂಗಳಿನಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದೆ. ಈ ಸಾಧನೆಯನ್ನು ಮನಗಂಡು ಹಲವಾರು ಗಣ್ಯರು ಭೇಟಿಯಾಗಿ ಸಾಧನೆಯನ್ನು ಪ್ರೋತ್ಸಾಹಿಸಿ, ಸನ್ಮಾನಿಸಿರುತ್ತಾರೆ.

ಈ ಸಂದರ್ಭ ಸೌತಡ್ಕ ದೇವಸ್ಥಾನದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ, ಶಶಿ ಕೊಕ್ಕಡ ಶ್ರೀ ಲಕ್ಷ್ಮೀ ಡಿಜಿಟಲ್ಸ್ , ಭಕ್ತಿ ಹೆಜ್ಜೆ ಬಳಗದ ಸದಸ್ಯರಾದ ದಿನೇಶ್ ಗೌಡ ಕೊಯ್ಯೂರು ಹಾಗೂ ಸಾಧಕಿಯ ಪೋಷಕರಾದ ಶೇಖರ ಶೆಟ್ಟಿ ಮತ್ತು ಮನೆಯವರು ಮತ್ತು ಇವರ ಸಹಪಾಠಿ ಮಿತ್ರರು ಇವರ ಜೊತೆಗೆ ಉಪಸ್ಥಿತರಿದ್ದರು..

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!