23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶ್ರೀಮತಿ ಶಾರದ ಮತ್ತು ಶೇಖರ ಶೆಟ್ಟಿ ದಂಪತಿಯ ಪುತ್ರಿ ಶ್ರದ್ದಾ ಶೆಟ್ಟಿಯವರು ಜ. 06 ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ತನಗೆ ಸಿಕ್ಕಿದ ಪ್ರಶಸ್ತಿಯೊಂದಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.
ಪ್ರಸ್ತುತ ಶ್ರದ್ದಾ ಶೆಟ್ಟಿಯವರು ಉಜಿರೆ ಎಸ್. ಡಿ. ಎಂ ಕಾಲೇಜಿನಲ್ಲಿ ಬಿಎಡ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇವರು ತನ್ನ ಹವ್ಯಾಸವಾಗಿ ಹೂವಿನ ರಂಗೋಲಿಗಳನ್ನು ಬಿಡಿಸುತ್ತಿದ್ದರು. ಇತ್ತೀಚಿಗೆ ಬೃಹದಾಕಾರದ ಹೂವಿನ ರಂಗೋಲಿಯನ್ನು ಬಿಡಿಸಿ ವಿಶ್ವದಾಖಲೆ ನಿರ್ಮಿಸಿದರು. ಈ ಹೂವಿನ ರಂಗೋಲಿ ಬಿಡಿಸಲು ಸೌತಡ್ಕದಿಂದಲೇ ಹೂವುಗಳನ್ನು ಕೊಂಡೋಗಿರುವುದು ಕೂಡಾ ಪ್ರಶಸ್ತಿ ಲಭಿಸಲು ಮತ್ತು ವಿಶ್ವ ದಾಖಲೆ ನಿರ್ಮಿಸಲು ಕಾರಣವಾಯಿತೆಂದು ಪ್ರಶಸ್ತಿ ವಿಜೇತೆ ಕುಮಾರಿ ಶ್ರದ್ದಾ ಶೆಟ್ಟಿರವರ ಮನದಾಳದ ಮಾತಾಗಿತ್ತು.

ಪ್ರಸ್ತುತ ಇವರು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯೆ ಮತ್ತು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆ ಇಲ್ಲಿಯ ಭಜಕಿಯಾಗಿರುತ್ತಾರೆ. ಈಕೆಯ ಸಾಧನೆಗೆ ಇನ್ನೊಂದು ಗರಿಮೆ ಕೂಡಾ ಸೇರಿಕೊಂಡಿದೆ. ಇವರ ಸಾಧನೆ ಎಂದರೆ 1 ಗಂಟೆ 39 ನಿಮಿಷದಲ್ಲಿ 8 ಫೀಟ್ ಹೂವಿನ ರಂಗೊಲಿಯನ್ನು ತಯಾರಿಸಿ, ದಾಖಲೆ ನಿರ್ಮಿಸಿದ್ದು ಈ ಶ್ರಮದ ಫಲವಾಗಿ ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಲಭಿಸಿದ್ದು ,ಮುಂದಕ್ಕೆ ಇದೇ ಸಾಧನೆಗೆ ನವಂಬರ್ ತಿಂಗಳಿನಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ ಲಭಿಸಿದೆ. ಈ ಸಾಧನೆಯನ್ನು ಮನಗಂಡು ಹಲವಾರು ಗಣ್ಯರು ಭೇಟಿಯಾಗಿ ಸಾಧನೆಯನ್ನು ಪ್ರೋತ್ಸಾಹಿಸಿ, ಸನ್ಮಾನಿಸಿರುತ್ತಾರೆ.

ಈ ಸಂದರ್ಭ ಸೌತಡ್ಕ ದೇವಸ್ಥಾನದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ, ಶಶಿ ಕೊಕ್ಕಡ ಶ್ರೀ ಲಕ್ಷ್ಮೀ ಡಿಜಿಟಲ್ಸ್ , ಭಕ್ತಿ ಹೆಜ್ಜೆ ಬಳಗದ ಸದಸ್ಯರಾದ ದಿನೇಶ್ ಗೌಡ ಕೊಯ್ಯೂರು ಹಾಗೂ ಸಾಧಕಿಯ ಪೋಷಕರಾದ ಶೇಖರ ಶೆಟ್ಟಿ ಮತ್ತು ಮನೆಯವರು ಮತ್ತು ಇವರ ಸಹಪಾಠಿ ಮಿತ್ರರು ಇವರ ಜೊತೆಗೆ ಉಪಸ್ಥಿತರಿದ್ದರು..

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!