July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸಂಪರ್ಕಕ್ಕೆ ಅನುಕೂಲ ಕಲ್ಪಿಸುವಂತಹ ಸ್ಥಳಗಳಲ್ಲಿ ಕಾಲುಸಂಕ‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ಈ ಬಾರಿಗೆ ತಲಾ ರೂ.25 ಲಕ್ಷ ವೆಚ್ಚದಲ್ಲಿ ಒಟ್ಟು ನಾಲ್ಕು ಕಾಮಗಾರಿಗಳು ಅನುಮೋದನೆಗೊಂಡಿರುತ್ತದೆ.

ಅನುಮೋದನೆಗೊಂಡ ಕಾಮಗಾರಿಗಳ ವಿವರ: ಮಲವಂತಿಗೆ ಗ್ರಾಮದ ಕುಮೇರು ಪರಿಶಿಷ್ಟ ಪಂಗಡ ಕಾಲೊನಿ ರಸ್ತೆಯಲ್ಲಿ ಕಾಲುಸಂಕ. , ನೆರಿಯ ಗ್ರಾಮದ ಪುಲ್ಲಾಜೆ ಎಂಬಲ್ಲಿ ಕಾಲುಸಂಕ, ಸವಣಾಲು ಗ್ರಾಮದ ಕೋಡಿಮುಗೇರು ಎಂಬಲ್ಲಿ ಕಾಲುಸಂಕ, ಕುಕ್ಕೇಡಿ ಗ್ರಾಮದ ಕಾಜಾಲ ಎಂಬಲ್ಲಿ ಕಾಲುಸಂಕ, ಈ ಎಲ್ಲಾ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಕಲ್ಪಿಸಲಿದ್ದು ಈ ಕಾರ್ಯಕ್ಕೆ ರೂ.1.00ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!