September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

ಮಚ್ಚಿನ: ಶ್ರೀ ಕ್ಷೇತ್ರ ಬಳ್ಳಮಂಜದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥ ಮಂಟಪದ ನಿರ್ಮಾಣದ ನಿಧಿ ಕುಂಭ ಸ್ಥಾಪನೆ ಪೂರ್ವಕ ಷಡಾಧಾರ ಪ್ರತಿಷ್ಠೆ ಹಾಗೂ ಅಷ್ಟೇಷ್ಟಕ ಸ್ಥಾಪನೆ ಪೂರ್ವಕ ಗರ್ಭನ್ಯಾಸವು ಜ.04 ರಂದು ಬ್ರಹ್ಮಶ್ರೀ ದೇರೆಬೈಲು ಡಾ. ಶಿವಪ್ರಸಾದ ತಂತ್ರಿಗಳ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು.

ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ. ಎಂ ಹರ್ಷ ಸಂಪಿಗೆತ್ತಾಯ ಧಾರ್ಮಿಕ ವಿಧಿಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಂಗಳೂರು ಶ್ರೀ ಕ್ಷೇತ್ರ ಶರವು ಮೊಕ್ತೇಸರರು ಶ್ರೀ ಶರವು ರಾಘವೇಂದ್ರ ಶಾಸ್ತ್ರಿ, ಶಾಸಕ ಹರೀಶ್ ಪೂಂಜ , ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗ್ಲೋಬಲ್ ಹೆಡ್ ಇನ್ಫೋಸಿಸ್ ಐ ಟಿ ಉಪಾಧ್ಯಕ್ಷ ರಾಧಾಕೃಷ್ಣ ಎಸ್, ಪುರಂದರ ರೈ ಮಿತ್ರಂಪಾಡಿ ಕೃಷಿಕರು ಪುತ್ತೂರು, ಮಂಗಳೂರು ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ , ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ , ಯೋಗೀಶ್ ಪೂಜಾರಿ ಕಡ್ತಿಲ ಉಪಸ್ಥಿತರಿದ್ದರು.

ದೇವಾಲಯದ ಸಿಂಬದಿ ವರ್ಗ ಊರಿನ ಗಣ್ಯರು ಕ್ಷೇತ್ರದ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.
✍️ಹರ್ಷ ಬಳ್ಳಮಂಜ

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!