September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

ಬೆಳ್ತಂಗಡಿ: ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುರ್ತು ಸ್ಪಂದನಾ ತಂಡ ಬೆಳ್ತಂಗಡಿ ಇದರ ಸ್ವಯಂಸೇವಕರು ಅಂತಾರಾಷ್ಟ್ರೀಯ ಫ್ರೀ ಡ್ರೈವಿಂಗ್ (ಈಜು)ತರಬೇತಿಯಲ್ಲಿ ಪಾಲ್ಗೊಂಡಿರುತ್ತಾರೆ.


ಬಂಟ್ವಾಳ ತಾಲೂಕು ವಿಟ್ಲ ಸಮೀಪದ ಅಡ್ಯನಡ್ಕದ ವಾರಾಣಸಿ ಫಾರ್ಮ್ನಲ್ಲಿ ಅಂತಾರಾಷ್ಟ್ರೀಯ ಫ್ರೀ ಡ್ರೈವಿಂಗ್ ಕೋಚಸ್ ಅಪ್ ಏಷ್ಯಾದ ಸ್ಥಾಪಕ ಜೇರೋಲೆನ್ ಎಲೌಟ್ ಇವರಿಂದ 7 ದಿನದ ತರಬೇತಿ ಕಾರ್ಯಕ್ರಮ ಆರಂಭಗೊಂಡಿದೆ.
ಈಜುಗಾರಿಕೆಯಲ್ಲಿ 30 ವರ್ಷಗಳ ಸುದೀರ್ಘ ಅನುಭವ ಪಡೆದ ಇವರು ನೆದರಲ್ಯಾಂಡ್ ದೇಶದಿಂದ ತರಬೇತಿ ನೀಡಲು ಆಗಮಿಸಿರುತ್ತಾರೆ.


ಈಜುಗಾರಿಕೆಯ ಮುಂಚೆ ವಹಿಸಬೇಕಾದ ಎಚ್ಚರಿಕೆ ಕ್ರಮಗಳು, ಈಜುವಾಗ ಆರೋಗ್ಯದಲ್ಲಿ ಆಗುವ ಏರುಪೇರುಗಳು, ಅದಕ್ಕೆ ಆರೋಗ್ಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಯ ಮಾಹಿತಿಯೊಂದಿಗೆ ಈಜುಗಾರಿಕೆಯಲ್ಲಿ ವಿವಿಧ ಆಯಾಮಗಳ ಪ್ರಾತ್ಯಕ್ಷತೆಯನ್ನು ಈಜು ಕೊಳದಲ್ಲಿ ಮಾಡಿಸಿರುತ್ತಾರೆ.


ತರಬೇತಿ ಸಹಾಯಕರಾಗಿ ಜೇಕೊಬ್, ವಿನಯ್, ಪ್ರಿಯಾಂಕಾ ಸಹಕಾರ ನೀಡಿರುತ್ತಾರೆ.
ತರಬೇತಿಯಲ್ಲಿ ಬೆಳ್ತಂಗಡಿ ತಾಲೂಕು ಸಮಿತಿ ಮಾಸ್ಟರ್ ಅವಿನಾಶ್ ಭಿಡೆ, ಸ್ವಯಂ ಸೇವಕರಾದ ಸಚಿನ್ ಭೀಡೆ, ರಮೇಶ್, ಅನಿಲ್, ಜಯರಾಮ್, ಸತೀಶ್ ನೆರಿಯ, ಶರತ್ ನಿಂತಿಕಲ್ಲು ತರಬೇತಿಯಲ್ಲಿ ಪಾಲ್ಗೊಂಡಿದ್ದು, ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಕಿಶೋರ್ ಕುಮಾರ್ ಮಾರ್ಗದರ್ಶನ ನೀಡಿರುತ್ತಾರೆ.

Related posts

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಯ್ಯೂರು ಮಲೆಬೆಟ್ಟು ಬದಿನಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya
error: Content is protected !!