23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ನೆಲಹಾಸು ಗ್ರಾನೈಟ್ ಕೆಲಸಕ್ಕೆ ಧನ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ರೂ.1 ಲಕ್ಷ ದೇಣಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ಪಂಚಾಯತ್ ಸದಸ್ಯರಾದ ಉಮಾವತಿ ಕೋಡಿಯಡ್ಕ ಟ್ರಸ್ಟಿನ ಕಾರ್ಯದರ್ಶಿ ಧರ್ನಪ್ಪ ನಾಯ್ಕ ಆನಡ್ಕ, ಹಾಗೂ ವಿನೋದರ ಸಾಲ್ಯಾನ್, ಸತೀಶ್ ಪಿಲಿಕಲ್, ಸುಧಾಕರ ಪ್ರಭು, ಸುರೇಂದ್ರ ಪೂಜಾರಿ, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya
error: Content is protected !!