25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!