ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya
error: Content is protected !!