25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ ವೀಲ್ ಹಬ್ ತುಂಡರಿಸಿದ ಪರಿಣಾಮವಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬದಲಿ ಬಸ್ ಮೂಲಕ ಪ್ರಯಾಣಿಕರನ್ನು ಕಳುಹಿಸುವ ಕೆಲಸವಾಗಿದೆ.

“ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”:ಸರಕಾರಿ ಬಸ್ ಟಯರ್ ಕಳಚಿ ಬಿದ್ದ ಸಂದರ್ಭವನ್ನು ಸ್ಥಳೀಯರು ಸುದ್ದಿ ಉದಯ ವರದಿಗಾರದೊಂದಿಗೆ ವಿವರಿಸುತ್ತಾ, ಸರಕಾರಿ ಬಸ್ ಗಳು ದಾರಿಮಧ್ಯೆ ಕೆಟ್ಟುನಿಲ್ಲುವುದು, ಟಯರ್ ಬ್ಲಾಸ್ಟ್ ಅಥವಾ ಕಳಚಿ ಬೀಳುವುದು ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಈ ರೀತಿಯ ಅನಾಹುತಗಳು ಚಾರ್ಮಾಡಿ ಘಾಟ್ ನಂತಹ ಪ್ರದೇಶಗಳಲ್ಲಿ ನಡೆದರೆ, ಪ್ರಯಾಣಿಕರ ಹಾಗೂ ಚಾಲಕರ ಪ್ರಾಣಕ್ಕೆ ಕಂಟಕ ತರುವಂತಾಗಿದೆ. ಒಟ್ಟಾರೆಯಾಗಿ “ಬಸ್ಸ್ಗ್ ಗತಿ ಇಜ್ಜಿ, ಸರಕಾರಗ್ ಮತಿ ಇಜ್ಜಿ”. ಸರಕಾರದ ಯೋಜನೆಗಳಿಂದಾಗಿ ರಿಪೇರಿಗೂ ಹಣ ಇಲ್ಲದಂತಾಗಿದೆ. ಬಸ್ಸ್ ಗಳನ್ನು ಸರಿಯಾಗಿ ಪರಿಶೀಲನೆ ನಡೆಸಿ ಸಂಚಾರಕ್ಕೆ ಬಿಡಬೇಕು ಎಂದು ಹೇಳಿದರು.

Related posts

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya

ಬೆಳ್ತಂಗಡಿ ಅಂಗನವಾಡಿ ಚರ್ಚ್ ನಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya
error: Content is protected !!