23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾರ್ಗದರ್ಶನದಲ್ಲಿ ನಡೆಯುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ೯:೩೦ ರಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾ ಭವನದಲ್ಲಿ ನಡೆಯಲಿದೆ.


ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಷನ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಪ್ರೊ. ಶಶಿಶೇಖರ್ ಎನ್. ಕಾಕತ್ಕರ್ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ. ವಹಿಸಲಿದ್ದಾರೆ. ವಿವಿಧ ವಿ.ವಿ. ಗಳ ಮುಖ್ಯಸ್ಥರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿದ್ವಾಂಸರಿAದ ವಿಚಾರ ಸಂಕಿರಣ ನಡೆಯಲಿದೆ.


ಇದೇ ವೇಳೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರವಾಡದ ಕಿಟೆಲ್ ಕಲಾ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಚಂದಗುಡೆ ನಡೆಸಿಕೊಡಲಿದ್ದಾರೆ.


ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಆಡಳಿತ ಕುಲಸಚಿವ ಪ್ರೊ. ಶ್ರೀಧರ ಎನ್. ಭಟ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಹರಿಹರದ ಎಸ್.ಜೆ.ವಿ.ಪಿ. ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ರಮೇಶ್ ಕೆ. ಪರ್ವತಿ, ಮೈಸೂರಿನ ಸೇಂಟ್ ಫಿಲೋಮೆನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ ಉಮೇಶ್, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ರಾಷ್ಟ್ರೀಯ ವಿಚಾರ ಸಂಕಿರಣದ ಪ್ರಧಾನ ಸಂಯೋಜಕ ಪ್ರಾಚಾರ್ಯ ಪ್ರೊ. ವಿಶ್ವನಾಥ ಪಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!